ನವದೆಹಲಿ: ಕನಸು ಕಾಣುವ ಧೈರ್ಯವಿರುವವರಿಂದ ಮತ್ತು ಅರ್ಹತೆಯ ಆಧಾರದಲ್ಲಿ ಪ್ರಯತ್ನ ನಡೆಸುವವರಿಂದ ನವ ಭಾರತ ವ್ಯಾಖ್ಯಾನಿಸಲ್ಪಟ್ಟಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಇಂಡಿಯಾ ಟುಡೇ ಮೈಂಡ್ ರಾಕ್ಸ್ 2017 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಠಿಣ ಪರಿಶ್ರಮದ ಮೂಲಕ ಸಾಧನೆಯ ಉತ್ತುಂಗವನ್ನು ತಲುಪುವವರಿಗೆ ಜನರು ನವಭಾರತದಲ್ಲಿ ಹೆಚ್ಚಿನ ಗೌರವವನ್ನು ನೀಡಲಿದ್ದಾರೆ’ ಎಂದರು.
ನವದೆಹಲಿಯು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವ ಮತ್ತು ಮಹಿಳೆಯರನ್ನು ಗೌರವಿಸುವ ಪ್ರದೇಶವಾಗಿದೆ ಎಂದರು.
ಬ್ಲೂವೇಲ್ ಚಾಲೇಂಜ್ನಿಂದ ಮಕ್ಕಳನ್ನು ದೂರವಿರಿಸುವಂತೆ ಕರೆ ನೀಡಿದ ಅವರು, ಮಕ್ಕಳಿಗೆ ಕೆಟ್ಟ ಸ್ಪರ್ಶ ಮತ್ತು ಒಳ್ಳೆಯ ಸ್ಪರ್ಶಗಳ ಬಗ್ಗೆ ಮಾಹಿತಿಯನ್ನು ಪೋಷಕರು ನೀಡಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.