ಬೆಂಗಳೂರು: ಪ್ರಶಸ್ತಿಯೊಂದಿಗೆ ದೊರೆತ ಐದು ಲಕ್ಷ ರೂಪಾಯಿಗಳ ಪೈಕಿ ಎರಡು ಲಕ್ಷ ರೂಪಾಯಿಗಳನ್ನು ದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್.ದೊರೆಸ್ವಾಮಿ ಅವರ ಕಾರ್ಯಕ್ಕೆ ಭಾರೀ ಶ್ಲಾಘನೆಗಳು ವ್ಯಕ್ತವಾಗಿದೆ.
ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪಾತ್ರರಾಗಿದ್ದ ದೊರೆಸ್ವಾಮಿ ಅವರಿಗೆ 5 ಲಕ್ಷ ರೂಪಾಯಿ ನೀಡಲಾಗಿತ್ತು. ಈ ಹಿರಿ ವಯಸ್ಸಿನಲ್ಲಿ ಅಷ್ಟೊಂದು ಹಣದ ಅವಶ್ಯಕತೆ ನನಗಿಲ್ಲ ಎಂದು ಅವರು 2 ಲಕ್ಷ ರೂಪಾಯಿಯನ್ನು ದಾನ ಮಾಡಿದ್ದಾರೆ.
1 ಲಕ್ಷ ರೂಪಾಯಿಯನ್ನು ಜಯದೇವ ಹೃದ್ರೋಗ ಸಂಸ್ಥೆಗೆ ಮತ್ತು 1 ಲಕ್ಷ ರೂಪಾಯಿಯನ್ನು ಭೂ ಹೀನರಿಗಾಗಿ ಹೋರಾಡುತ್ತಿರುವ ಸಮಾನತೆಗಾಗಿ ಜನಾಂದೋಲನ ಸಂಸ್ಥೆಗೆ ದೇಣಿಗೆಯಾಗಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.