ಜೈಪುರ: ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುತ್ತಿರುವ ಗುಜ್ಜರ್ ಸಮುದಾಯದ ಒಬ್ಬನೇ ಒಬ್ಬ ವ್ಯಕ್ತಿಯನ್ನು ಬಂಧಿಸದ ರಾಜಸ್ಥಾನ ಸರ್ಕಾರವನ್ನು ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಗುಜ್ಜರ್ ಸಮುದಾಯದವರ ಪ್ರತಿಭಟನೆಯಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದ್ದು, ಇಲ್ಲಿಯವರೆಗೂ ಗುಜ್ಜರ್ ಸಮುದಾಯದ ಒಬ್ಬ ನಾಯಕನನ್ನು ಯಾಕೆ ಬಂಧಿಸಿಲ್ಲ, ಅವರ ಮೇಲೆ ಯಾಕೆ ಎಫ್ಐಆರ್ ದಾಖಲಿಸಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿದೆ.
ಕಳೆದ ಹಲವು ದಿನಗಳಿಂದ ಗುಜ್ಜರ್ ಸಮುದಾಯದವರು ಕಾನೂನುಬಾಹಿರವಾಗಿ ರಸ್ತೆ ಮತ್ತು ರೈಲು ತಡೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ, ಈ ಪ್ರತಿಭಟನೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ಡಿಜಿಪಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಈ ಕೂಡಲೇ ರಸ್ತೆ ಮತ್ತು ರೈಲು ಮಾರ್ಗಗಳನ್ನು ಸಂಚಾರ ಮುಕ್ತಗೊಳಿಸಬೇಕು ಎಂದು ಸೂಚಿಸಿದೆ.
ಅಲ್ಲದೇ ನಾಳೆಯೇ ಎಫ್ಐಆರ್ ದಾಖಲಿಸಿ ಪ್ರತಿಭಟನಾಕಾರರ ವಿರುದ್ಧ ಕ್ರಮಗೊಳ್ಳುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.