ನವದೆಹಲಿ: ಡಾ. ಬಿ. ಆರ್. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನ್ನು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಮೋದಿ, ‘ಸಾಮಾಜಿಕ ಹಾಗೂ ಆರ್ಥಿಕ ವಿಷಯಗಳ ಸಂಶೋಧನೆಗೆ ಈ ಸೆಂಟರ್ ಮಹತ್ವದ ಅವಕಾಶಗಳನ್ನು ಒದಗಿಸಲಿದೆ’ ಎಂದರು.
ಸಂವಿಧಾನ ಶಿಲ್ಪಿಯ ಚಿಂತನೆಗಳ ಪ್ರಚಾರಗಳಿಗೆ ಸೆಂಟರ್ ಒತ್ತು ನೀಡಲಿದ್ದು, ಯುವ ಜನತೆಗೆ ಪ್ರೇರಕವಾಗಲಿದೆ ಎಂದಿದ್ದಾರೆ.
ಸರ್ಕಾರ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ 5 ಜಾಗಗಳನ್ನು ಅಭಿವೃದ್ಧಿಪಡಿಸಿದೆ. ದೆಹಲಿ, ಮುಂಬಯಿ, ನಾಗ್ಪುರ, ಮೊವ್, ಲಂಡನ್ನಲ್ಲಿನ ಸ್ಥಳಗಳು ಪ್ರಮುಖ ಯಾತ್ರಸ್ಥಳಗಳಾಗಿ ರೂಪುಗೊಂಡಿವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.