ಚಾಮರಾಜನಗರ: ಓಲೈಕೆ ರಾಜಕಾರಣಕ್ಕೆ ಗಂಟು ಬಿದ್ದಿರುವ ಸಿಎಂ ಸಿದ್ದರಾಮಯ್ಯನವರು ಇಂದು ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ. ಆರ್ಎಸ್ಎಸ್, ಬಜರಂಗದಳವರು ಉಗ್ರಗಾಮಿಗಳು ಎನ್ನುವ ಮೂಲಕ ಹಿಂದುತ್ವವಾದಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಚಾಮರಾಜನಗರದ ನಾಗವಳ್ಳಿ ಗ್ರಾಮಕ್ಕೆ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆಂದು ಆಗಮಿಸಿದ ಸಿಎಂ, ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಪಿಎಫ್ಐ ನಿಷೇಧಿಸುತ್ತೀರಾ ಎಂದು ಪತ್ರಕರ್ತರು ಕೇಳಿದರೆ ’ಆರ್ಎಸ್ಎಸ್, ಬಜರಂಗದಳವದರು ಉಗ್ರಗಾಮಿಗಳು’ ಎಂಬ ಉತ್ತರ ನೀಡಿ ಪರೋಕ್ಷವಾಗಿ ಪಿಎಫ್ಐ ಬೆಂಬಲಕ್ಕೆ ನಿಂತಿದ್ದಾರೆ. ಓಲೈಸುವ ರಾಜಕಾರಣವೂ ಅವರ ಈ ಮಾತಿನ ಹಿಂದೆ ಇದೆ ಎಂಬುದು ಸ್ಪಷ್ಟ.
ಅವರ ಈ ಹೇಳಿಕೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ವಿವಾದವನ್ನು ಹುಟ್ಟು ಹಾಕಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದವರಿಂದ ಯಾವ ಸಮರ್ಥನೆಗಳು ಬರುತ್ತದೆ ಎಂದು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.