ರಾಯ್ಪುರ: ಛತ್ತೀಸ್ಗಢದ 7 ನಕ್ಸಲ್ ಪೀಡಿತ ಜಿಲ್ಲೆಗಳ ಅಭಿವೃದ್ಧಿಗಾಗಿ ಮೂರು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ಒಟ್ಟು 696 ಕೋಟಿ ರೂಪಾಯಿಗಳ ನೆರವನ್ನು ಬಿಡುಗಡೆ ಮಾಡಿದೆ.
ಕೇಂದ್ರದ ವಿಶೇಷ ನೆರವು ಯೋಜನೆಯಡಿ ಈ ಹಣವನ್ನು ಬಿಡುಗಡೆ ಮಾಡಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಛತ್ತೀಸ್ಗಢ ಸಿಎಂ ರಮಣ್ ಸಿಂಗ್ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಬುಡಕಟ್ಟು ಜನಾಂಗ ಪ್ರಮುಖವಾಗಿರುವ ದಂತೇವಾಡ, ಬಿಜಾಪುರ, ಸುಕ್ಮಾ, ನಾರಾಯಣಪುರ, ಕೊಂಡಗಾಂವ್, ಬಸ್ತರ್, ಕಂಕರ್ಗಳ ಅಭಿವೃದ್ಧಿಗೆ ಈ ಹಣ ಬಳಕೆಯಾಗಲಿದೆ.
ಪ್ರತಿ ಜಿಲ್ಲೆಗಳಿಗೆ 2017-18ಮತ್ತು 2019-20ರ ಅವಧೀಗೆ ರೂ.26ಕೋಟಿ ನೆರವು ಸಿಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.