ಜಮ್ಮು: ಜಮ್ಮು ಕಾಶ್ಮೀರದ ಗಡಿಭಾಗದ ಉರಿ ಸೆಕ್ಟರ್ ಬಳಿ 4 ಜೈಶೇ ಮೊಹಮ್ಮದ್ ಉಗ್ರರನ್ನು ಹೊಡೆದುರುಳಿಸಿದ ಬೆನ್ನಲ್ಲೇ ಇದೀಗ ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ 7 ಪಾಕ್ ಸೈನಿಕರನ್ನು ಹೊಡೆದುರುಳಿಸಿದೆ.
ಅಂತಾರಾಷ್ಟ್ರೀಯ ಗಡಿ ರೇಖೆ ಪೂಂಚ್ ಜಿಲ್ಲೆಯ ಮೇಧಾರ್ ಸೆಕ್ಟರ್ನ ಕೋಟ್ಲಿ ಪ್ರದೇಶದಲ್ಲಿ ಪಾಕಿಸ್ಥಾನ ಸೈನಿಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಕೂಡಾ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ಥಾನದ 4 ಸೇನಾ ಪೋಸ್ಟ್ ಧ್ವಂಸವಾಗಿದ್ದು, 7 ಜನ ಸೈನಿಕರು ಭಾರತೀಯ ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.
ಇಂದು 70 ನೇ ಸೇನಾ ದಿನಾಚರಣೆ. ಈ ಸಂದರ್ಭದಲ್ಲಿ ಪಾಕಿಸ್ಥಾನ ಸೈನಿಕರನ್ನು ಹತ್ಯೆಗೈದು ಭಾರತೀಯ ಯೋಧರು ಭಾರತೀಯರಿಗೆ ಉಡುಗೊರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.