ನವದೆಹಲಿ: ಇನ್ನು ಮುಂದೆ ರೂ.6 ಲಕ್ಷಕ್ಕಿಂತ ಮೇಲ್ಪಟ್ಟ ಖರೀದಿಗಳ ಬಗ್ಗೆ ರಿಟೇಲರ್ಗಳು ಫಿನಾನ್ಶಿಯಲ್ ಇಂಟೆಲಿಜೆನ್ಸ್ ಯುನಿಟ್ಗೆ ವರದಿಯನ್ನು ನೀಡಬೇಕು. ಹಣಕಾಸು ವಮಚನೆ ತಡೆಯಲು ಈ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಾರಂಭ ಮಾಡಿದೆ.
ಚಿನ್ನಾಭರಣ, ದುಬಾರಿ ವಸ್ತುಗಳ ಖರೀದಿ ವೇಳೆ ಈ ನಿಯಮ ಅನ್ವಯವಾಗಲಿದೆ.
ಜಾಗತಿಕ ಮಟ್ಟದಲ್ಲಿ ವರದಿ ನೀಡುವ ನಿಯಮವನ್ನು 10 ಸಾವಿರ ಡಾಲರ್ಗೆ ನಿಗದಿ ಮಾಡಲಾಗಿದೆ. ಇದೀಗ ಭಾರತದಲ್ಲಿ ರೂ.6 ಲಕ್ಷದವರೆಗೆ ಮಿತಿಯನ್ನು ನಿಗದಿಪಡಿಸಲು ನಿರ್ಧರಿಸಲಾಗಿದೆ, ಈ ಬಗೆಗಿನ ಚರ್ಚೆಗಳು ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ.
ಹಣಕಾಸು ವಂಚನೆಯನ್ನು ತಡೆಗಟ್ಟಲು ನರೇಂದ್ರ ಮೋದಿ ಸರ್ಕಾರ ಕೈಗೊಂಡಿರುವ ಹಲವಾರು ಕ್ರಮಗಳಲ್ಲಿ ಇದೂ ಒಂದಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.