ತಿರುವನಂತಪುರಂ: ದೇಶ 69ನೇ ಗಣರಾಜ್ಯೋತ್ಸವಕ್ಕೆ ಸಜ್ಜಾಗುತ್ತಿರುವಂತೆ ಕೇರಳದ ಎಡಪಂಥೀಯ ಸರ್ಕಾರ ವಿಚಿತ್ರ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದರನ್ವಯ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ರಾಷ್ಟ್ರಧ್ವಜವನ್ನು ಆರೋಹಣ ಮಾಡುವ ಅವಕಾಶ ಸಿಗಲಿದೆ.
ಶಾಲೆ-ಕಾಲೇಜುಗಳಲ್ಲಿ, ಸಾರ್ವಜನಿಕ ಕಛೇರಿಗಳಲ್ಲಿ ಆಯಾ ಸರ್ಕಾರಿ ಇಲಾಖೆಯ ಮುಖ್ಯಸ್ಥರು ಮಾತ್ರ ಧ್ವಜಾರೋಹಣ ಮಾಡಬೇಕು ಎಂಬ ಆದೇಶವನ್ನು ಸಿಎಂ ಪಿನರಾಯಿ ವಿಜಯನ್ ನೇತೃತ್ವದ ಸರ್ಕಾರ ಹೊರಡಿಸಿದೆ.
ಜನಸಾಮಾನ್ಯರಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡಿದರೆ ಅದರ ದುರ್ಬಳಕೆಯಾಗುವ ಸಾಧ್ಯತೆ ಇದೆ ಎಂದು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದೆ.
ಆದರೆ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರು ಕೇರಳದ ಪಲ್ಲಕಾಡ್ ಶಾಲೆಯೊಂದರಲ್ಲಿ ಧ್ವಜಾರೋಹಣ ನಡೆಸುವುದನ್ನು ತಪ್ಪಿಸುವ ಸಲುವಾಗಿ ಈ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.
ಕೇರಳ ಸರ್ಕಾರದ ಈ ಅರ್ಥವಿಲ್ಲದ ಆದೇಶ ಇದೀಗ ಭಾರೀ ವಿವಾದ ಸೃಷ್ಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.