ನವದೆಹಲಿ: ರೈಲು ಹಳಿಗಳ ಸಮೀಪ ಸೆಲ್ಫಿ ಕ್ಲಿಕ್ಕಿಸುವುದು, ಸ್ಟಂಟ್ಗಳನ್ನು ಮಾಡುವುದನ್ನು ನಿಲ್ಲಿಸುವಂತೆ ನಾಗರಿಕರಿಗೆ ರೈಲ್ವೇ ಸಚಿವ ಪಿಯೂಶ್ ಗೋಯಲ್ ಮನವಿ ಮಾಡಿಕೊಂಡಿದ್ದಾರೆ.
ಮೊನ್ನೆಯಷ್ಟೇ ತೆಲಂಗಾಣದ ವಾರಂಗಲ್ನಲ್ಲಿ ರೈಲು ಹಳಿ ಮೇಲೆ ಯುವಕನೊಬ್ಬ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಪಘಾತಕ್ಕೊಳಗಾಗಿ ಪ್ರಾಣ ಕಳೆದುಕೊಂಡಿದ್ದ, ಈ ಹಿನ್ನಲೆಯಲ್ಲಿ ಸಚಿವರು ಜನರಿಗೆ ಕಿವಿ ಮಾತು ಹೇಳಿದ್ದಾರೆ.
ಯುವ ಜನತೆ ದೇಶದ ಭವಿಷ್ಯ. ಅವರು ಈ ರೀತಿ ಸೆಲ್ಫಿ, ಸ್ಟಂಟ್ಗಳಿಗೆ ಬಲಿಯಾಗುತ್ತಿರುವುದನ್ನು ನೋಡಲು ದುಃಖವಾಗುತ್ತದೆ. ದಯವಿಟ್ಟು ರೈಲ್ವೇ ಹಳಿಗಳ ಸಮೀಪ ಇಂತಹ ಸಾಹಸಗಳನ್ನು ಮಾಡಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.