ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಫೆ.4ರಂದು ಕನ್ನಡ ಚಳುವಳಿ ವಾಟಾಳ್ ಪಕ್ಷ ಬೆಂಗಳೂರು ಬಂದ್ಗೆ ನೀಡಿದ್ದ ಕರೆಯನ್ನು ಹೈಕೋರ್ಟ್ ಠುಸ್ ಮಾಡಿದೆ.
ಬಂದ್ಗೆ ಕರೆ ನೀಡುವುದು ಅಸಂವಿಧಾನಿಕ ಸಾರ್ವಜನಿಕ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ನ ವಿಭಾಗೀಯ ಪೀಠ ಹೇಳಿದೆ. ಅಲ್ಲದೇ ಬಂದ್ ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘ, ನಿಲುಮೆ ಪ್ರತಿಷ್ಠಾನದ ರಾಕೇಶ್ ಶೆಟ್ಟಿ, ಭಾರ್ಗವ ಬಳಗದ ಅಜಿತ್ ಶೆಟ್ಟಿ ಕಿರಾಡಿ ಹಾಕಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಬೆಂಗಳೂರಿನಲ್ಲಿ ಫೆಬ್ರವರಿ ನಾಲ್ಕರಂದು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ, ವ್ಯಾಪಾರ ವಹಿವಾಟು ಹಾಗೂ ಸಾರ್ವಜನಿಕ ಸಾರಿಗೆಯಲ್ಲಿ ಯಾವುದೇ ರೀತಿಯ ತೊಂದರೆ ಅಥವಾ ವ್ಯತ್ಯಯ ಆಗದಂತೆ ನೋಡಿಕೊಳ್ಳುವಂತೆ ಕರ್ನಾಟಕ ಸರಕಾರಕ್ಕೆ ಸೂಚಿಸಿತು.
‘ಬೆಂಗಳೂರು ಬಂದ್’ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್ ಜಿ ರಮೇಶ್ ನೇತೃತ್ವದ ವಿಭಾಗೀಯ ಪೀಠ, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಬಂದ್ ಮಾಡುವಂತಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ತೀರ್ಪು ಪಾಲಿಸಲು ಕ್ರಮ ಕೈಗೊಳ್ಳಿ ಮತ್ತು ಜನಜೀವನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಎಲ್ಲವನ್ನು ಬಂದ್ ಮಾಡಿ ಬೇರೆಯವರಿಗೆ ತೊಂದರೆ ಕೊಡುವುದು ಮೂಲಭೂತ ಹಕ್ಕು ಅಲ್ಲ ಮತ್ತು ಇದು ಸಂವಿಧಾನ ಬಾಹಿರ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.