News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಟಿಪ್ಪು ಹೆಸರಿಡಲು ಬಿಜೆಪಿ ವಿರೋಧ

suresh-kumar

ಬೆಂಗಳೂರು : ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡಲು ಬಿಬಿಎಂಪಿ ಯೊಚಿಸುತ್ತಿದ್ದು, ಈ ಸಂಬಂಧ ಪತ್ರಿಕೆಯಲ್ಲಿ ಪ್ರಕಟಣೆಯೊಂದನ್ನು ನೀಡಿತ್ತು. ಇದನ್ನು ವಿರೋಧಿಸಿ ಬಿಜೆಪಿ ಬಿಬಿಎಂಪಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಮಾಜಿ ಸಚಿವ ಮತ್ತು  ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಸೋಮವಾರ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿ ಮರು ನಾಮಕರಣದ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಆಲೂರು ವೆಂಕಟರಾಯರು ಕನ್ನಡದ ಕುಲಪುರೋಹಿತರು ಎಂದು ಹೆಸರು ಪಡೆದಿದ್ದು ಕರ್ನಾಟಕ ರಾಜ್ಯದ ಏಕೀಕರಣದಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಹಿರಿಯ ಚೇತನದ ನೆನಪಿಗೆ ಈ ಹೆಸರನ್ನು ಇಡಲಾಗಿತ್ತು. ಅದನ್ನು ಪಾಲಿಕೆ ಬದಲಾಯಿಸಬಾರದು. ಇಂತಹ ಕಾರ್ಯಕ್ಕೆ ಬಿಜೆಪಿ ವಿರೋಧ ವ್ಯಕ್ತ ಪಡಿಸುತ್ತದೆ ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ರಸ್ತೆಯೊಂದಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ನಮ್ಮ ವಿರೋಧವಿಲ್ಲ. ಆದರೆ, ಈಗಾಗಲೇ ಆಲೂರು ವೆಂಕಟರಾವ್ ರಸ್ತೆ ಎಂದು ನಾಮಕರಣವಾಗಿರುವ ರಸ್ತೆಗೆ ಮರು ನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಬಿಜೆಪಿ ನಾಯಕರು ಮನವಿಯಲ್ಲಿ ತಿಳಿಸಿದ್ದಾರೆ.

Tags: , ,

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top