ವಿಜಯಪುರ: ದೇಶದ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಮತ್ತು ನೀರು ಸಂರಕ್ಷಣೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ‘ಅಟಲ್ ಭೂ ಜಲ’ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಮಂಗಳವಾರ ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಅವರು ಚಾಲನೆ ನೀಡಿದ ಮಾತನಾಡಿದರು. ಬಳ್ಳಾರಿಯಲ್ಲೂ ಅವರು ಚತುಷ್ಪಥ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಸುಮಾರು 600 ರೂಪಾಯಿ ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ, ನದಿ-ಕೊಳಗಳ ಪುನರುಜ್ಜೀವನ, ನೀರಿನ ಸಂರಕ್ಷಣೆ ಇತ್ಯಾದಿಗಳನ್ನು ಇದು ಒಳಗೊಳ್ಳಲಿದೆ. ರೂ.3000ವನ್ನು ಕೇಂದ್ರ ಸರ್ಕಾರ ಭರಿಸಲಿದೆ, ಉಳಿದ ಹಣವನ್ನು ವಿಶ್ವಬ್ಯಾಂಕ್ನಿಂದ ನೆರವು ಪಡೆಯುತ್ತೇವೆ ಎಂದಿದ್ದಾರೆ.
ಇದೇ ವೇಳೆ ದೇಶದಲ್ಲಿ ಒಟ್ಟು 2 ಸಾವಿರ ಡ್ರೈವಿಂಗ್ ಸ್ಕೂಲ್ಗಳನ್ನು ತೆರೆಯುವುದಾಗಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.