ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕುಶಾಲನಗರದ ಶ್ರೀ ಮಹಾಗಣಪತಿ ದೇವರಿಗೆ ಪೂಜೆ ಸಲ್ಲಿಸುವುದರ ಮೂಲಕ ಇಂದು (ಮಾ. 3) ‘ಮಂಗಳೂರು ಚಲೋ’ ಪಾದಯಾತ್ರೆಗೆ ಕುಶಾಲನಗರದಲ್ಲಿ ಚಾಲನೆಯನ್ನು ನೀಡಿದರು. ಅಂಕೋಲದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮತ್ತು ಸಂಸದೆ ಶೋಭ ಕರಂದ್ಲಾಜೆ ಚಾಲನೆಯನ್ನು ನೀಡಿದರು.
ಹಿಂದೂ ಕಾರ್ಯಕರ್ತರ ಹತ್ಯೆಗಳನ್ನು ಖಂಡಿಸಿ ಹಾಗೂ ಇಂತಹ ದುಷ್ಕೃತ್ಯ ಎಸಗುತ್ತಿರುವ ಪಿಎಫ್ಐ ಮತ್ತು ಎಸ್ಡಿಪಿಐಗಳನ್ನು ಪೋಷಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ‘ಮಂಗಳೂರು ಚಲೋ -ನಾಡ ಜನರ ರಕ್ಷಣೆಗಾಗಿ ಜನಸುರಕ್ಷಾ ಯಾತ್ರೆ ’ ಪಾದಯಾತ್ರೆಯನ್ನು ಬಿಜೆಪಿ ಹಮ್ಮಿಕೊಂಡಿದೆ.
ಇಂದು ಕುಶಾಲನಗರ ಹಾಗೂ ಅಂಕೋಲದಿಂದ ಪ್ರಾರಂಭವಾದ ಯಾತ್ರೆಯು ಮಾರ್ಚ್ 6 ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರಿನ ಜ್ಯೋತಿ ವೃತ್ತದಲ್ಲಿ ಸಮಾಗಮಗೊಂಡು ಕೇಂದ್ರ ಮೈದಾನದೆಡೆಗೆ ಬೃಹತ್ ಪಾದಯಾತ್ರೆ ನಡೆಯಲಿದ್ದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರು ಪ್ರಮುಖ ಭಾಷಣ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆ ವಹಿಸಲಿದ್ದು ಪಕ್ಷದ ನಾಯಕರು, ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.