ನವದೆಹಲಿ: ತ್ರಿಪುರಾ ಮತ್ತು ತಮಿಳುನಾಡಿನಲ್ಲಿ ನಡೆದ ಪ್ರತಿಮೆ ಧ್ವಂಸ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಗೃಹಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ತ್ರಿಪುರಾದಲ್ಲಿ ಕಮ್ಯೂನಿಸ್ಟ್ ನಾಯಕ ಲೆನಿನ್ನ ಪ್ರತಿಮೆಯನ್ನು ಧ್ವಂಸ ಮಾಡಲಾಗಿತ್ತು. ಬಳಿಕ ತಮಿಳುನಾಡಿನಲ್ಲಿ ಇ.ವಿ.ರಾಮಸ್ವಾಮಿ ಪೆರಿಯಾರ್ ಪ್ರತಿಮೆಗೆ ಹಾನಿಯುಂಟು ಮಾಡಲಾಗಿದೆ. ಈ ಘಟನೆಯನ್ನು ಮೋದಿ, ರಾಜನಾಥ್ ಸಿಂಗ್ ಖಂಡಿಸಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಯಾ ಸರ್ಕಾರಗಳಿಗೆ ಸೂಚಿಸಿದ್ದಾರೆ.
ಇನ್ನೊಂದೆಡೆ ಪೆರಿಯಾರ್ ಮೂರ್ತಿ ಹಾನಿಗೆ ಪ್ರತಿಯಾಗಿ ಚೆನ್ನೈ ಬಿಜೆಪಿ ಕಾರ್ಯಾಲಯದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ. ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆಗೆ ಹಾನಿಯುಂಟು ಮಾಡಲಾಗಿದೆ.
ಈ ಎಲ್ಲಾ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹಸಚಿವಾಲಯ ರಾಜ್ಯ ಸರ್ಕಾರಗಳಿಗೆ ಈ ಕೃತ್ಯದ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸುವಂತೆ ಆದೇಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.