ಶಿಮ್ಲಾ: ರಾಜ್ಯಸಭೆಯ 59 ಸ್ಥಾನಗಳು ಎಪ್ರಿಲ್ ವೇಳೆಗೆ ಖಾಲಿಯಾಗಲಿವೆ. ಇದರಲ್ಲಿ 17 ಸ್ಥಾನಗಳು ಬಿಜೆಪಿಯದ್ದು ಮತ್ತು 12 ಸ್ಥಾನಗಳು ಕಾಂಗ್ರೆಸ್ನದ್ದು. ಇದರಲ್ಲಿ ರೇಖಾ, ಸಚಿನ್ ತೆಂಡೂಲ್ಕರ್ ಅನು ಅಗಾ ಅವರು ಕೂಡ ಸೇರಿದ್ದಾರೆ.
ಬಿಜೆಪಿಯ 17 ಸದಸ್ಯರಲ್ಲಿ 8 ಮಂದಿ ಕೇಂದ್ರ ಸಚಿವರುಗಳಾಗಿದ್ದಾರೆ.
ವಿತ್ತ ಸಚಿವ ಅರುಣ್ ಜೇಟ್ಲಿಯವರು ಉತ್ತರಪ್ರದೇಶದಿಂದ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ, ರವಿಶಂಕರ್ ಪ್ರಸಾದ್ ಅವರು ಬಿಹಾರದಿಂದ ಸ್ಪರ್ಧಿಸಲಿದ್ದಾರೆ. ಧರ್ಮೇಂದ್ರ ಪ್ರಧಾನ್ ಮತ್ತು ತಾವರ್ ಚಂದ್ ಗೆಹ್ಲೋಟ್ ಅವರು ಮಧ್ಯಪ್ರದೇಶದಿಂದ ಸ್ಪರ್ಧಿಸಲಿದ್ದಾರೆ.
ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ಸಚಿವ ಜೆಪಿ ನಡ್ಡಾ ಅವರು ಹಿಮಾಚಲಪ್ರದೇಶದಿಂದ ಸ್ಪರ್ಧಿಸುತ್ತಿದ್ದು, ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.