ನವದೆಹಲಿ: ಅಸಿಯಾನ್ ರಾಷ್ಟ್ರಗಳ ಸಹಕಾರದೊಂದಿಗೆ ಭಾರತೀಯ ವಾಯುಸೇನೆ ನಡೆಸುತ್ತಿರುವ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಅಭ್ಯಾಸ (ಎಚ್ಎಡಿಆರ್) ಕೇರಳದ ಕರಾವಳಿಯಲ್ಲಿ ಇಂದಿನಿಂದ ಆರಂಭಗೊಂಡಿದೆ.
ಈ ಬಹುಪಕ್ಷೀಯ ಅಭ್ಯಾಸಕ್ಕೆ ‘ಸಂವೇದನಾ’ ಎಂದು ಹೆಸರಿಡಲಾಗಿದ್ದು, ಇದರಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಯುಎಇನ ವಾಯುಸೇನೆಯ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಮಾರ್ಚ್ 12ರಿಂದ 17ರವರೆಗೆ ಈ ಅಭ್ಯಾಸ ಜರಗಲಿದೆ. ಸಂಯೋಜಿತ ವಿಪತ್ತು ನಿರ್ವಹಣಾ ಪ್ರಯತ್ನವನ್ನು ಉತ್ತೇಜಿಸುವ ಉದ್ದೇಶದೊಂದಿಗೆ ’ಸಂವೇದನಾ’ವನ್ನು ಆಯೋಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.