ನವದೆಹಲಿ: ರಾಮನಾಥ ಕೋವಿಂದ್ ಅವರು ರಾಷ್ಟ್ರಪತಿಯಾಗಿ 8 ತಿಂಗಳು ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಅವರು ರಾಷ್ಟ್ರಪತಿ ಭವನದ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ.
ಮಹಾತ್ಮ ಗಾಂಧೀಜಿಯವರ ‘ಸರಳ ಜೀವನ, ಉನ್ನತ ಚಿಂತನೆ’ ಧ್ಯೇಯವನ್ನು ಅಚ್ಚುಕಟ್ಟಾಗಿ ಪಾಲನೆ ಮಾಡುತ್ತಿರುವ ಕೋವಿಂದ್ ಅವರು ರಾಷ್ಟ್ರಪತಿ ಭವನದ ಅನಗತ್ಯ ವ್ಯಯಗಳಿಗೆ ಕಡಿವಾಣ ಹಾಕಿರುವುದು ದೊಡ್ಡ ಸಾಧನೆ.
ಜುಲೈ 25ರಂದು ಅಧಿಕಾರ ಸ್ವೀಕರಿಸಿದ ಅವರು ರಾಷ್ಟ್ರಪತಿ ಭವನದೊಳಗೆ ತಯಾರಿಸಲಾಗುತ್ತಿದ್ದ ಹಲವಾರು ತಿಂಡಿ ತಿನಿಸುಗಳಿಗೆ ಬ್ರೇಕ್ ಹಾಕಿದ್ದಾರೆ. ಕೇವಲ ಮಿತವಾಗಿ ಅಗತ್ಯ ಆಹಾರಗಳು ತಯಾರಾಗುವಂತೆ ನೋಡಿಕೊಳ್ಳುತ್ತಿದ್ದಾರೆ.
ಈಗ ಅಲ್ಲಿಗೆ ಬರುವ ಅತಿಥಿಗಳಿಗೆ ಕೇವಲ ಎರಡು ಬಗೆಯ ತಿಂಡಿಗಳನ್ನು ಮಾತ್ರ ನೀಡಲಾಗುತ್ತದೆ. ಈ ಹಿಂದೆ ಬಗೆ ಬಗೆಯ ತಿಂಡಿಗಳನ್ನು ನೀಡಲಾಗುತ್ತಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.